ಶಿರಸಿ: ತಾಲೂಕಿನ ಬನವಾಸಿಯ ಶ್ರೀ ಮಧುಕೇಶ್ವರ ದೇವಾಲಯಕ್ಕೆ ಸೋಮವಾರ ಕಾರ್ಮಿಕ ಆಖತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ನಂತರ ಬನವಾಸಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಭಾಗ್ಯ ಲಕ್ಷ್ಮೀ ಬಾಂಡ್ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಅರ್ಹ ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮೀ ಬಾಂಡ್ ವಿತರಿಸಿದರು.
ಈ ಸಂದರ್ಭದಲ್ಲಿ ಬನವಾಸಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು