Slide
Slide
Slide
previous arrow
next arrow

ಸದ್ದಿಲ್ಲದೆ ಸಿದ್ಧವಾಗುತ್ತಿದೆ ‘ಶ್ರಮಿಕ್ ನಿವಾಸ’: ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ವಸತಿ ಯೋಜನೆ ಜಾರಿ

300x250 AD

ಬೆಂಗಳೂರು: ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಕರ್ನಾಟಕವನ್ನು ಕಾರ್ಮಿಕ ಸ್ನೇಹಿಯಾಗಿಸಿರುವ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲು ಎನ್ನುವಂತಹ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿ ಮಾಡುತ್ತಿದೆ.
ಕಾರ್ಮಿಕರ ವಿವಿಧ ಸಹಾಯಧನಗಳಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಮಾಡಿರುವ ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಶ್ರಮಿಕರ ಖಾತೆಗೆ ಸಹಾಯಧನವನ್ನು ನೇರವಾಗಿ ವರ್ಗಾವಣೆ ಮಾಡುವ ವ್ಯವಸ್ಥೆ ಜಾರಿ ಮಾಡಿರುವ ರಾಜ್ಯ ಕಾರ್ಮಿಕ ಇಲಾಖೆ, ಕಾರ್ಮಿಕರ ಕುಟುಂಬ ವರ್ಗದವರಿಗೂ ಭರಪೂರ ಯೋಜನೆಗಳನ್ನು ನೀಡಿದೆ.

ಶ್ರಮಿಕ ಮಕ್ಕಳಿಗೆ ಶಿಶುಪಾಲನಾ ಕೇಂದ್ರದಿಂದ ಆರಂಭಗೊಂಡು ಉನ್ನತ ಶಿಕ್ಷಣ ತರಬೇತಿವರೆಗೆ ಪ್ರತಿ ಹಂತದಲ್ಲಿ ಶ್ರಮಿಕ ವರ್ಗಕ್ಕೆ ಇಲಾಖೆ ಬೆನ್ನೆಲುಬಾಗಿ ನಿಂತಿದ್ದು, ಇದೀಗ ‘ಶ್ರಮಿಕ್ ನಿವಾಸ್’ ಎಂಬ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಶೀಘ್ರವೇ ಜಾರಿ ಆಗಲಿದೆ.

ಏನಿದು ಶ್ರಮಿಕ್ ನಿವಾಸ್ ಯೋಜನೆ:

300x250 AD

ರಾಜ್ಯದಲ್ಲಿನ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಯಲ್ಲಿ ಶ್ರಮಿಕ ವರ್ಗದ ಪಾತ್ರ ಮಹತ್ವದ್ದಾಗಿದೆ. ಹೀಗೆ ವಿವಿಧೆಡೆ ಕಾರ್ಯನಿರ್ವಹಿಸಲು ಆಗಮಿಸುವ ಕಾರ್ಮಿಕ ವರ್ಗ ರಸ್ತೆ ಬದಿ ಮತ್ತು ನೈರ್ಮಲ್ಯಯುತ ಪ್ರದೇಶಗಳಲ್ಲಿ ಗುಡಿಸಲು ಹಾಕಿಕೊಂಡು ಕಾರ್ಯನಿರ್ವಹಿಸುವ ಪರಿಸ್ಥಿತಿ ಸರ್ವೇ ಸಾಮಾನ್ಯ. ಇಂತಹ ಸ್ಥಳಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ಬದುಕು ಸಾಗಿಸುವುದರಿಂದ ಅವರಿಗೆ ಮೂಲಭೂತ ಸೌಕರ್ಯದ ಕೊರತೆ ಜತೆಗೆ ಅನಾರೋಗ್ಯ ಸಮಸ್ಯೆ ಸಹ ಕಾಡುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಮನಗಂಡ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಶ್ರಮಿಕ ವರ್ಗಕ್ಕೆ ವಸತಿ ಸೌಲಭ್ಯ ಒದಗಿಸುವ ಸಂಕಲ್ಪದೊಂದಿಗೆ ಶ್ರಮಿಕ್ ನಿವಾಸ್ ಯೋಜನೆ ಜಾರಿಗೆ ಸಜ್ಜಾಗಿದೆ.
ಕೈಗಾರಿಕಾ ಪ್ರದೇಶಗಳು ಸೇರಿದಂತೆ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ‘ಶ್ರಮಿಕ್ ನಿವಾಸ್’ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಈ ಯೋಜನೆಯ ಮೊದಲ ಹಂತವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ “ಶ್ರಮಿಕ್ ನಿವಾಸ್- ಬೃಹತ್ ವಸತಿ ಸಮುಚ್ಚಯ’ ಉದ್ಘಾಟನೆಗೆ ಸಜ್ಜಾಗುತ್ತಿದೆ.

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ದೂರದೃಷ್ಟಿಯಿಂದಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ. ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದ್ದು, ಏಕ ಹಾಸಿಗೆ ವ್ಯವಸ್ಥೆಯಡಿ 96 ಕಾರ್ಮಿಕರು ಮತ್ತು ದ್ವಿ-ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರಿಗೆ ವಸತಿ ಅನುಕೂಲ ಲಭಿಸಲಿದೆ. ಇನ್ನು ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದ್ದು, ಒಂದು ಕುಟುಂಬದಲ್ಲಿ ನಾಲ್ಕು ಮಂದಿ ಎಂಬಂತೆ 48 ಕಾರ್ಮಿಕ ಕುಟುಂಬಗಳಿಗೆ ಮೊದಲ ಹಂತದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಡಿ ಇರಿಸಿದೆ.
ಮೂಲಸೌಕರ್ಯಕ್ಕೂ ಆದ್ಯತೆ:
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗುತ್ತಿರುವ “ಶ್ರಮಿಕ್ ನಿವಾಸ್” ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೂ ಆದ್ಯತೆ ನೀಡಲಾಗಿದ್ದು, ಈ ವಸತಿ ಸಮುಚ್ಚಯಗಳನ್ನು ಇಲಾಖೆಯೇ ನಿರ್ವಹಿಸಲಿದ್ದು, ಕಾರ್ಮಿಕ ಮಂಡಳಿ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರಿಗೆ ಈ ವಸತಿ ಸೌಲಭ್ಯ ದೊರಕಲಿದೆ.
ರಾಜ್ಯ ಕಾರ್ಮಿಕ ಇಲಾಖೆ ಜಾರಿ ಮಾಡಿರುವ ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಶ್ರಮಿಕ ವರ್ಗದ ಅದರಲ್ಲೂ ವಲಸೆ ಕಾರ್ಮಿಕರ ಬಹು ದಿನಗಳ ವಸತಿ ಸಮಸ್ಯೆ ನಿವಾರಣೆ ಆಗಲಿದ್ದು, ಇದರಿಂದ ಕೈಗಾರಿಕೆಗಳ ಕಾರ್ಮಿಕ ಕೊರತೆ ಸಮಸ್ಯೆಯೂ ನಿವಾರಣೆ ಆಗಲಿದ್ದು, ಇದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೇಶದ 5 ಟ್ರಿಲಿಯನ್ ಕನಸು ನನಸಾಗಲಿದೆ.

Share This
300x250 AD
300x250 AD
300x250 AD
Back to top