Slide
Slide
Slide
previous arrow
next arrow

ಜಾತ್ರೆಗೆ ಹೊರಟವರ ಕಾರ್ ಅಪಘಾತ; ಈರ್ವರ ದಾರುಣ ಸಾವು

300x250 AD

ಮುಂಡಗೋಡ: ತಾಲೂಕಿನ ಪಾಳಾ ಜಾತ್ರೆಗೆ ಹೊರಟಿದ್ದ ಇಬ್ಬರು ಯುವಕರು ಕಾರು ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಪಾಳಾ ಕ್ರಾಸ್ ಸಮೀಪ ಬುಧವಾರ ರಾತ್ರಿ ಜರುಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹೋದರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರು ಮುಂಡಗೋಡ ಪಟ್ಟಣದ ಗಣೇಶ ಗಾಣಿಗೇರ ಮತ್ತು ಮಹೇಶ ಗಾಣಿಗೇರ್ ಎಂದು ಗುರುತಿಸಲಾಗಿದೆ.

300x250 AD

ಕಾರಿನಲ್ಲಿದ್ದ ಇನ್ನೂ ಮೂರು ಜನ ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This
300x250 AD
300x250 AD
300x250 AD
Back to top