Slide
Slide
Slide
previous arrow
next arrow

ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ: ವಿವೇಕ್ ಹೆಬ್ಬಾರ್ ಭಾಗಿ

300x250 AD

ಮುಂಡಗೋಡ: ತಾಲೂಕಿನ ನಾಗನೂರ ಗ್ರಾಮಪಂಚಾಯತ ವ್ಯಾಪ್ತಿಯ ಕಲ್ಕೇರಿ, ಹನುಮಾಪುರ, ನಾಗನೂರ ಹಾಗೂ ಅಟ್ಟಣಗಿ ಗ್ರಾಮದಲ್ಲಿ ಯುವನಾಯಕ ವಿವೇಕ್ ಹೆಬ್ಬಾರ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿದರು.

ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಕೈಗೊಳ್ಳಬೇಕಾಗಿರುವ ಕಾರ್ಯತಂತ್ರದ ಕುರಿತು ಸುದೀರ್ಘವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಬೂತ್ ನಲ್ಲಿ ಪೇಜ್ ಪ್ರಮುಖರ ಜವಾಬ್ದಾರಿಗಳನ್ನು ವಿವರಿಸಿದರು.

300x250 AD

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಬಾಳಂಬೀಡ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಹಾಲಪ್ಪ ಕೊಡಣನವರ್, ಪ್ರಮುಖರಾದ ಗುಡ್ಡಪ್ಪ ಕಾತೂರ, ವೈ.ಪಿ.ಪಾಟೀಲ್, ಸಿದ್ದಪ್ಪ ಹಡಪದ ಸೇರಿದಂತೆ ಗ್ರಾಮಪಂಚಾಯತ ಅಧ್ಯಕ್ಷರು, ಸ್ಥಳೀಯ ಮುಖಂಡರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top