• Slide
    Slide
    Slide
    previous arrow
    next arrow
  • ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಶಿರಸಿಯಲ್ಲಿ ಸಂಭ್ರಮಾಚರಣೆ

    300x250 AD

    ಶಿರಸಿ: ಭಾರತೀಯ ಜನತಾ ಪಾರ್ಟಿ ಶಿರಸಿ ನಗರ ಮಂಡಲ ವತಿಯಿಂದ ಭಾರತದ ಈಶಾನ್ಯ ಭಾಗಗಳಾದ ತ್ರಿಪುರ,ನಾಗಾಲ್ಯಾಂಡ್ ಮೇಘಾಲಯಗಳ ಚುನಾವಣಾ ಅಭೂತ ಪೂರ್ವ ಯಶಸ್ಸಿಗಾಗಿ ನಗರದ ದೇವಿಕೆರೆ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

    ನಗರ ಅಧ್ಯಕ್ಷ ರಾಜೇಶ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಮುಕ್ತ ಭಾರತದ ಬಿಜೆಪಿಯ ಸಂಕಲ್ಪಕ್ಕೆ ಈಗಾಗಲೇ ನಾಂದಿ ಹಾಡಲಾಗಿದ್ದು ಈ ವಿಜಯ ಭದ್ರ ಬುನಾದಿಯಾಗಿದೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಇಡೀ ಭಾರತವೇ ಒಪ್ಪಿಕೊಂಡಿದ್ದು ಖಂಡಿತವಾಗಿಯೂ ಮುಂಬರುವ ಕರ್ನಾಟಕ ರಾಜ್ಯದ ಚುನಾವಣೆಯಲ್ಲಿ
    ಮಿಷನ್ 150 ರ ಸಂಕಲ್ಪದಲ್ಲಿ ಬಿಜೆಪಿ ವಿಜಯ ದುಂಧುಬಿ ಮೊಳಗಿಸಲಿದೆ ಎಂದರು.

    300x250 AD

    ಈ ವೇಳೆ ಬಿಜೆಪಿ ಜಿಲ್ಲಾ, ನಗರ ಪದಾಧಿಕಾರಿಗಳು, ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು,ಸದಸ್ಯರು,ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top