Slide
Slide
Slide
previous arrow
next arrow

ವಿವೇಕ್ ಹೆಬ್ಬಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ಸಭೆ

300x250 AD

ಮುಂಡಗೋಡ : ತಾಲೂಕಿನ ಗುಂಜಾವತಿ ಗ್ರಾಮಪಂಚಾಯತ ವ್ಯಾಪ್ತಿಯ ಗುಂಜಾವತಿ ಮತ್ತು ಉಗ್ಗಿನಕೇರಿಯಲ್ಲಿ ಶನಿವಾರ ಯುವನಾಯಕ ವಿವೇಕ್ ಹೆಬ್ಬಾರ್ ಕಾರ್ಯಕರ್ತರ ಸಂಘಟನಾತ್ಮಕ ಸಭೆ ನಡೆಸಿದರು. ಬೂತ್ ಕಾರ್ಯಕರ್ತರೊಂದಿಗೆ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಬಾಳಂಬೀಡ್, ಗ್ರಾಮಪಂಚಾಯತ ಅಧ್ಯಕ್ಷರಾದ ಬಸಯ್ಯ ನಡುವಿನಮನಿ, ಪ್ರಮುಖರಾದ ಗುಡ್ಡಪ್ಪ ಕಾತೂರ, ಉಮೇಶ್ ಬಿಜಾಪುರ, ಸಂತೋಷ ಬೋಸ್ಲೆ, ಗಣಪತಿ ನೆಲಗೆ ಸೇರಿದಂತೆ ಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top