Slide
Slide
Slide
previous arrow
next arrow

ರಸಪ್ರಶ್ನೆ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

300x250 AD

ಶಿರಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗು ಕನ್ನಡ ಕನ್ನಡಿಗರ ಶಿಕ್ಷಣ ರಕ್ಷಣಾ ವೇದಿಕೆ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳ ಟ್ಯೂಷನ್ ಸಮಾರೋಪ ಹಾಗು ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ತಾಲೂಕಿನ ದಾಸನಕೊಪ್ಪ ಮಲೆನಾಡು ಪ್ರೌಢಶಾಲೆಯಲ್ಲಿ ನಡೆಯಿತು.

ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯೆ ಅಕ್ಕಮ ಆಲೂರ್ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಶೈಲೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡಿಗರ ಶಿಕ್ಷಣ ರಕ್ಷಣಾ ವೇದಿಕೆಯ ಪ್ರಮುಖರಾದ ಶರತ ಕುಮಾರ್ ಬಿಸಲಕೊಪ್ಪ ಇಮ್ರಾನ ದನಗನಹಳ್ಳಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೇವಾ ನಿರತೆ ಮಮತಾ ಉಪಸ್ಥಿತರಿದ್ದು ರಸಪ್ರಶ್ನೆ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಿಕೆ ವಿತರಿಸಿದರು. ಟ್ಯೂಶನ್ ಪಡೆದ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡರು.

300x250 AD
Share This
300x250 AD
300x250 AD
300x250 AD
Back to top