• Slide
    Slide
    Slide
    previous arrow
    next arrow
  • ಸ್ಕೂಟಿಯಲ್ಲಿ ಗಾಂಜಾ ಸಾಗಾಟ: ಆರೋಪಿ ಪೋಲೀಸರ ವಶಕ್ಕೆ

    300x250 AD

    ಮುಂಡಗೋಡ:ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಮುಂಡಗೋಡ ಪೋಲಿಸರು ದಾಳಿ ಮಾಡಿ, ಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

    ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರಮನಕೇರಿ ನಿವಾಸಿ, ಮಹ್ಮದ ಫಾರೂಕ್ ನಜೀರ ಅಹಮದ ಬಂಧಿತ ಆರೋಪಿಯಾಗಿದ್ದಾನೆ.

    ಮುಂಡಗೋಡ ತಾಲೂಕಿನ ಮಳಗಿ ಸಮೀಪ ಆರೋಪಿಯನ್ನು ಬಂಧಿಸಲಾಗಿದ್ದು ಬಂಧಿತ ಆರೋಪಿಯಿಂದ 40 ಸಾವಿರ ರೂಪಾಯಿ ಮೌಲ್ಯದ ವಶಪಡಿಸಿಕೊಳ್ಳಲಾಗಿದೆ. 500 ಗ್ರಾಂ.ಗಾಂಜಾವನ್ನು ಸಾಗರದಿಂದ ದಾಸನಕೊಪ್ಪ ಮಾರ್ಗವಾಗಿ ತಾಲೂಕಿನ ಮಳಗಿಯತ್ತ ಬರುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಗಾಂಜಾ ಸಾಗಿಸಲು ಬಳಸಿದ್ದ ಬೈಕ್ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    300x250 AD

    ಸಿಪಿಐ ಸಿದ್ದಪ್ಪ ಸಿಮಾನಿ ಮಾರ್ಗದರ್ಶನ ದಲ್ಲಿ ಪಿಎಸ್‌ಐ ಯಲ್ಲಾಲಿಂಗ ಕುನ್ನೂರ ಹಾಗೂ ಪಿಎಸ್‌ಐ ಎನ್‌. ಡಿ. ಜಕ್ಕಣ್ಣವರ ಮತ್ತು ಸಿಬ್ಬಂದಿಗಳಾದ ಕೋಟೇಶ, ಅಣ್ಣಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top