Slide
Slide
Slide
previous arrow
next arrow

ಯಲ್ಲಾಪುರದಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ ಸ್ವಾಗತಿಸಿದ ಸಚಿವ ಹೆಬ್ಬಾರ್

300x250 AD

ಯಲ್ಲಾಪುರ: ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ‘ವಿಜಯ ಸಂಕಲ್ಪ ಯಾತ್ರೆ’ಯನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿ, ಶ್ರೀ ಗ್ರಾಮದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಿದರು.

ಪಟ್ಟಣ ಪ್ರಮುಖ ರಸ್ತೆಗಳಲ್ಲಿ ಸಹಸ್ರಾರು ಕಾರ್ಯಕರ್ತರೊಂದಿಗೆ ‘ವಿಜಯ ಸಂಕಲ್ಪ ರಥ’ವನ್ನು ಸಂಚರಿಸಿ, ಅಂಬೇಡ್ಕರ್ ವೃತ್ತದ ಬಳಿಯಲ್ಲಿ ತೆರೆದ ವಾಹನದಲ್ಲಿ ಸಚಿವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

300x250 AD

ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ವಿಭಾಗ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಸೇರಿದಂತೆ ಮಂಡಲ ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ, ಶಕ್ತಿ ಕೇಂದ್ರದ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top