• Slide
    Slide
    Slide
    previous arrow
    next arrow
  • ಅಫ್ಘಾನಿಸ್ಥಾನದ ಭಾರತೀಯ ಪ್ರಜೆಗಳ ಸುರಕ್ಷತೆಗೆ ಕ್ರಮ

    300x250 AD

    ನವದೆಹಲಿ: ಅಫ್ಘನಿಸ್ಥಾನದಿಂದ ಮರಳುವ ಭಾರತೀಯ ಪ್ರಜೆಗಳ ಸುರಕ್ಷತೆ, ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಅನುಕೂಲ ಒದಗಿಸಲಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

    ಅಫ್ಘನಿಸ್ಥಾನದಲ್ಲಿರುವ ಸಿಖ್, ಹಿಂದೂ ಸಮುದಾಯಗಳ ಪ್ರತಿನಿಧಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಹಾಗೆಯೇ ಆ ದೇಶವನ್ನು ತೊರೆಯಲು ಬಯಸುವವರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಸಚಿವಾಲಯ ಹೇಳಿದೆ.

    300x250 AD

    ಅಲ್ಲಿಂದ ಸ್ವದೇಶಕ್ಕೆ ಮರಳಲು ಬಯಸುವ ಭಾರತದ ಪ್ರಜೆಗಳಿದ್ದಾರೆ. ಅವರೊಂದಿಗೆ ಸರ್ಕಾರ ಸಂಪರ್ಕ ಸಾಧಿಸಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರು ದೇಶ ತೊರೆಯಲು ಸೇರಿದ್ದ ಹಿನ್ನೆಲೆಯಲ್ಲಿ ಗೊಂದಲಗಳಾಗಿತ್ತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಸಹ ತನ್ನ ಸೇವೆ ರದ್ದುಗೊಳಿಸುವಂತಾಗಿತ್ತು ಎಂದು ಸಚಿವಾಲಯ ಹೇಳಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top