• Slide
    Slide
    Slide
    previous arrow
    next arrow
  • ವಾಕ್ಪ್ರತಿಯೋಗಿತಾ ಸ್ಪರ್ಧೆ: ಶ್ರೀಮಾತಾ ಸಂಸ್ಕೃತ ಮಹಾಪಾಠಶಾಲಾ ವಿದ್ಯಾರ್ಥಿಗಳ ಸಾಧನೆ

    300x250 AD

    ಯಲ್ಲಾಪುರ: ಶ್ರೀ ಕಾಶಿಯ ಬನಾರಸ್ ಹಿಂದೂ ವಿಶ್ವವಿದ್ಯಲಯದಲ್ಲಿ ಮಾ. 22 ರಿಂದ 25ರವರೆಗೆ ನಡೆದ 2022-23ರ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ತಾಲೂಕಿನ ಉಮ್ಮಚಗಿಯ ಶ್ರೀ ಶ್ರೀಮಾತಾ ಸಂಸ್ಕೃತ ಮಹಾಪಾಠಶಾಲೆಯ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ.

    ಸಾಹಿತ್ಯ ಭಾಷಣದಲ್ಲಿ ನಾಗರಾಜ ಭಟ್ಟ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಸತತ ಎರಡನೇ ಬಾರಿ ತನ್ನದಾಗಿಸಿಕೊಂಡಿದ್ದಾನೆ.

    ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ ಗಣೇಶಪ್ರಸಾದ ನಾಗರಾಜ ಭಟ್ಟ ಕೊಣೆಮನೆ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ, ಹಾಗೂ ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ವಿನಾಯಕ ಭಟ್ಟ ದ್ವಿತೀಯ ಸ್ಥಾನದೊಂದಿಗೆ ರಜತ ಪದಕ ಪಡೆದಿದ್ದಾರೆ. ಅಂತೆಯೇ ಸುಭಾಷಿತ ಕಂಠ ಪಾಠ ಸ್ಪರ್ಧೆಯಲ್ಲಿ ಸುಮಂತ್ ಜೋಶಿ ದ್ವಿತೀಯ ಸ್ಥಾನದೊಂದಿಗೆ ರಜತ ಪದಕ ಪಡೆದಿದ್ದಾನೆ.

    300x250 AD

    ವಿದ್ಯಾರ್ಥಿಗಳ ಈ ಸಾಧನೆಗೆ ಗುರುವೃಂದದವರು, ಪಾಲಕರು, ಪೋಷಕರು ಅಭಿನಂದಿಸಿ ಹಾರೈಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top