Slide
Slide
Slide
previous arrow
next arrow

ವಾಕ್ಪ್ರತಿಯೋಗಿತಾ ಸ್ಪರ್ಧೆ: ಸಾಧನೆಗೈದ ಮಹೇಶ ಭಟ್ಟ ಹಿತ್ಲಕಾರಗದ್ದೆ

300x250 AD

ಶಿರಸಿ: ಕಾಶಿಯ ಹಿಂದೂ ಬನಾರಸ್ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 22ರಿಂದ 25ರವರೆಗೆ ನಡೆದ 2022-23 ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ತಾಲೂಕಿನ‌ ಸೋಂದಾ ಸ್ವರ್ಣವಲ್ಲಿಯ ಶ್ರೀರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆ ಕೃಷ್ಣಯಜುರ್ವೇದ ವಿದ್ಯಾರ್ಥಿ ಮಹೇಶ ಭಟ್ಟ ಹಿತ್ಲಕಾರಗದ್ದೆ, ವಿ.ಪ್ರಸಾದ ಜೋಶಿ ಇವರ ಮಾರ್ಗದರ್ಶನದಲ್ಲಿ ವೇದಭಾಷ್ಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ಪಾಠಶಾಲೆಗೆ ಕೀರ್ತಿಯನ್ನು ತಂದಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಸ್ವರ್ಣವಲ್ಲೀ ಶ್ರೀಗಳು, ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top