Slide
Slide
Slide
previous arrow
next arrow

ಬೇರೊಳ್ಳಿ ದೈವಜ್ಞ ಸಮಾಜದ ವರ್ಧಂತಿ ಉತ್ಸವ

300x250 AD

ಹೊನ್ನಾವರ: ತಾಲೂಕಿನ ಹಡಿನಬಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಬೇರೊಳ್ಳಿಯ ದೈವಜ್ಞ ಬ್ರಾಹ್ಮಣ ಸಮಾಜದ ನಾಗ ಚೌಡೇಶ್ವರಿ ದೇವಾಲಯದ ವರ್ಧಂತಿ ಉತ್ಸವ ವಿಜೃಂಭಣೆಯಿoದ ನಡೆಯಿತು.
ಕಾರ್ಯಕ್ರಮದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಮಂಕಾಳ ವೈದ್ಯ ಪಾಲ್ಗೊಂಡು ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ದೈವಜ್ಞ ಸಮಾಜದವರು ಈ ಸಂದರ್ಭದಲ್ಲಿ ಮಂಕಾಳ ವೈದ್ಯರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೃಷ್ಣ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಗೋಪಾಲ ನಾಯ್ಕ, ಭಟ್ಕಳ ತಾ.ಪಂ. ಮಾಜಿ ಅಧ್ಯಕ್ಷ ಈಶ್ವರ ನಾಯ್ಕ, ಗ್ರಾ.ಪಂ. ಸದಸ್ಯ ಐ.ವಿ.ನಾಯ್ಕ, ಹಡಿನಬಾಳ ಗ್ರಾ.ಪಂ. ಅಧ್ಯಕ್ಷೆ ಸುನೀತಾ ಶೇಟ್, ಉಪಾಧ್ಯಕ್ಷ ಶ್ರೀಧರ ನಾಯ್ಕ, ಸದಸ್ಯ ವೆಂಕಟೇಶ ಗೌಡ, ಇನ್ನುಳಿದ ಗ್ರಾ.ಪಂ. ಸದಸ್ಯರು, ದೈವಜ್ಞ ಸಮಾಜದವರು ಮತ್ತು ಮಂಕಾಳ ವೈದ್ಯರ ಅಭಿಮಾನಿಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top