ಭಟ್ಕಳ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಾಯಗೊಂಡು ಹಿಂಬದಿ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಲೂಕಿನ ಬಂದರು ರಸ್ತೆಯ ಬಳಿ ನಡೆದಿದೆ.
ಸಂಶುದ್ದೀನ್ ಸರ್ಕಲ್ ಕಡೆಯಿಂದ ಬಂದರ್ ರಸ್ತೆಯ ಕಡೆ ವೇಗವಾಗಿ ಸಾಗುತ್ತಿದ್ದ ಬೈಕ್ ಕಾರಿನ ಮುಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಹಿಂದೆ ಕುಳಿತಿದ್ದ ಆಜಾದ್ ನಗರದ ಶೇಡಿಕುಳಿ ಹೊಂಡದ ನಿವಾಸಿ ಮಹಮದ್ ಹುಸೇನ ಬುಡನಗೇರಿ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೈಕ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಕುರಿತು ಭಟ್ಕಳ ಶಹರ ಪೋಲೀಶ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.