Slide
Slide
Slide
previous arrow
next arrow

ಹೆಲಿಪ್ಯಾಡ್‌ನಲ್ಲಿ ಕಳ್ಳನ ಕೈಚಳಕ

300x250 AD

ಶಿರಸಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಿಂಬಾಲಕರ ಜೇಬಿಗೆ ಕೈ ಹಾಕಲು ಯತ್ನಿಸಿದ ಕಳ್ಳನನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ.
ನಗರದ ಎಂಇಎಸ್ ಮೈದಾನದಲ್ಲಿ ಹೆಲಿಕಾಪ್ಟರ್‌ನಿಂದ ಕುಮಾರಸ್ವಾಮಿ ಕೆಳಗೆ ಇಳಿದ ತಕ್ಷಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇದೇ ಸಮಯದಲ್ಲಿ ಕಳ್ಳ ಜೆಡಿಎಸ್ ಕಾರ್ಯಕರ್ತನೊಬ್ಬನ ಜೇಬಿಗೆ ಕನ್ನ ಹಾಕಲು ಯತ್ನಸಿದ್ದ.
ಜೇಬುಗಳ್ಳನನ್ನು ನೋಡುತ್ತಿದ್ದಂತೆ ಪೊಲೀಸರು ಗಮನಿಸಿ ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಶಕ್ಕೆ ಪಡೆದ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗೆಜ್ಜೆಹಳ್ಳಿ ಗ್ರಾಮದವನು ಎಂದು ತಿಳಿದು ಬಂದಿದ್ದು ಈ ಘಟನೆಯಿಂದ ಕೆಲ ಕಾಲ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ಗಲಿಬಿಲಿಗೊಂಡರು.

300x250 AD
Share This
300x250 AD
300x250 AD
300x250 AD
Back to top