• Slide
    Slide
    Slide
    previous arrow
    next arrow
  • ಘಟಪ್ರಭಾ ನದಿಯಲ್ಲಿ ಉತ್ತರ ಕನ್ನಡ ಮೂಲದ ನಾಲ್ವರು ಯುವಕರು ನೀರುಪಾಲು

    300x250 AD

    ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಉತ್ತರಕನ್ನಡ‌ ಮೂಲದ ನಾಲ್ವರು ಯುವಕರು ನೀರುಪಾಲಾಗಿದ್ದಾರೆ.

    ಮೃತರನ್ನು ಸಂತೋಷ ಬಾಬು ಇಟಗಿ (18), ಅಜಯ್ ಬಾಬು ಜೋರೆ (18), ಕೃಷ್ಣಾ ಬಾಬು ಜೋರೆ(22), ಆನಂದ ಕೋಕರೆ(19) ಎಂದು ಗುರುತಿಸಲಾಗಿದ್ದು, ನಾಲ್ವರೂ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರು ಎನ್ನಲಾಗಿದೆ.

    300x250 AD

    ಈ ಯುವಕರು ಘಟಪ್ರಭಾದ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಾರ್ ಗೆ ರಜೆ ಇದ್ದಿದ್ದರಿಂದ ಅವರು ಈಜಲು ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top