• Slide
    Slide
    Slide
    previous arrow
    next arrow
  • ಏ.17ಕ್ಕೆ ಅಂಕೋಲಾ ಕ್ಷೇತ್ರ ಅಭ್ಯರ್ಥಿ ರೂಪಾಲಿ ನಾಯ್ಕ್ ನಾಮಪತ್ರ ಸಲ್ಲಿಕೆ

    300x250 AD

    ಕಾರವಾರ: ಭಾರತೀಯ ಜನತಾ ಪಕ್ಷದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ ಅವರು ಏ.17ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಬೆಂಬಲ ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ಕಾರ್ಯಕರ್ತರು ಅತಿ ದೊಡ್ಡ ಶಕ್ತಿಯಾಗಿದ್ದು ಎಲ್ಲರೂ ಒಂದು ಕುಟುಂಬದಂತೆ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಜನರು ಬುದ್ಧಿವಂತರಾಗಿದ್ದು ಸರಿ ತಪ್ಪು ಯಾವುದು ಎನ್ನುವುದರ ಕುರಿತು ಆಲೋಚಿಸುವ ಶಕ್ತಿ ಅವರಿಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿಯನ್ನು ಪ್ರತಿ ಬೂತ್ ಮಟ್ಟದಲ್ಲಿ ಜನರಿಗೆ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಮಾತನಾಡಿ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಸರ್ಕಾರದ ಸಾಧನೆ, ಕ್ಷೇತ್ರದಲ್ಲಿ ನಡೆಸಲಾದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಬಿಜೆಪಿ ಗೆಲುವಿಗೆ ಎಲ್ಲರೂ ಒಂದಾಗಿ ಶ್ರಮಿಸೋಣ ಎಂದರು.

    300x250 AD

    ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಪ್ರಮುಖರುಗಳಾದ ರಾಜೇಂದ್ರ ನಾಯ್ಕ, ಜಗದೀಶ ನಾಯಕ ಮೊಗಟಾ ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top