Slide
Slide
Slide
previous arrow
next arrow

ಜಗದೀಶ ಶೆಟ್ಟರ್ ದುಡುಕಿನ ನಿರ್ಧಾರ ತೀವ್ರ ನೋವು ತಂದಿದೆ ; ವಿಷ್ಣು ನಾಯರ್

300x250 AD

ದಾಂಡೇಲಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವುದು ನಮ್ಮಂತ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತಂದಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು ನಾಯರ್ ಹೇಳಿದ್ದಾರೆ.

ಜಗದೀಶ ಶೆಟ್ಟರ್ ಅವರು ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳಬಾರದಿತ್ತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಬಂದಿರುವ ಜಗದೀಶ್ ಶೆಟ್ಟರ್ ಅವರು ಪಕ್ಷದ ಅತ್ಯಂತ ಸರಳ ಹಾಗೂ ಶಿಸ್ತಿನ ನಾಯಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂಬ ಒಂದೇ ಕಾರಣಕ್ಕೆ ಪಕ್ಷ ಬಿಟ್ಟು ಹೋಗುವುದು ಸರಿಯಾದ ನಡೆಯಲ್ಲ. ಅವರಿಗೆ ಪಕ್ಷ ಮತ್ತಷ್ಟು ವಿಶೇಷವಾದ ಸ್ಥಾನಮಾನ ನೀಡುವ ಭರವಸೆಯನ್ನು ನೀಡಿತ್ತು. ಆದಾಗ್ಯೂ ಪಕ್ಷ ಬಿಟ್ಟು ಹೋಗಿದ್ದಾರೆ. ಪಕ್ಷಕ್ಕಾಗಿ ಪ್ರಾಮಾಣಿಕ ದುಡಿಯುವ ಕಾರ್ಯಕರ್ತರಿಗೆ ಜಗದೀಶ ಶೆಟ್ಟರ್ ಅವರು ತೆಗೆದುಕೊಂಡ ನಿರ್ಧಾರದಿಂದ ತೀವ್ರ ಅಘಾತವಾಗಿದೆ ಎಂದಿದ್ದಾರೆ.

300x250 AD
Share This
300x250 AD
300x250 AD
300x250 AD
Back to top