• Slide
    Slide
    Slide
    previous arrow
    next arrow
  • ತಡೆಗೋಡೆ ತೆರವುಗೊಳಿಸಲು ಅಧಿಕಾರಿಗಳಿಗೆ ಮನವಿ

    300x250 AD

    ಹೊನ್ನಾವರ: ತಾಲೂಕಿನ ಕೆಳಗಿನೂರು ಗ್ರಾಮದ ಅಭಿತೋಟ ಹಾಗೂ ನಾಜಗಾರ ಬಳಿ ಅನಧಿಕೃತವಾಗಿ ನಿರ್ಮಿಸಿದ ತಡೆಗೋಡೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಇಡಗುಂಜಿ ಬಳ್ಕೂರು ಭಾಗದಿಂದ ಏತನೀರಾವರಿ ಯೋಜನೆಯ ಮೂಲಕ ನೀರು ಕಾಲುವೆ ಮೂಲಕ ಹರಿದು ಅಭಿತೋಟ ಹಾಗೂ ನಾಜಗಾರ ಸಮೀಪದ ಚಿಕ್ಕಪುಟ್ಟ ಹಳ್ಳದ ಮೂಲಕ ನೀರು ಹರಿಯುತ್ತಿತ್ತು. ಕಳೆದ ಕೆಲ ದಿನದ ಹಿಂದೆ ಅನಧಿಕೃತವಾಗಿ ನಿರ್ಮಾಣವಾದ ತಡೆಗೋಡೆಯಿಂದ ನೀರು ಹರಿಯುತ್ತಿಲ್ಲ. ಇದರಿಂದ ನಾಜಗಾರ ಭಾಗದ ನೂರಾರು ಮನೆಗಳ ಬಾವಿಯ ನೀರು ಕಡಿಮೆ ಆಗಿದೆ.

    300x250 AD

    ಕುಡಿಯಲು ಹಾಗೂ ಬೆಳೆದ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಕಟ್ಟು ತೆರವು ಮಾಡಿದರೆ ನೂರಾರು ಕುಡುಂಬಗಳಿಗೆ ನೀರಿನ ಬವಣೆ ತಪ್ಪಲಿದೆ. ಸರ್ಕಾರದ ನಿಯಮ ಗಾಳಿಗೆ ತೂರಿ ನಿರ್ಮಿಸಿದ ಈ ತಡೆಗೋಡೆ ಕೂಡಲೇ ಅಧಿಕಾರಿಗಳು ತೆರವುಗೊಳಿಸುವಂತೆ ಗ್ರಾಮಸ್ಥರು ತಹಶೀಲ್ದಾರರಿಗೆ, ತಾಲೂಕ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top