Slide
Slide
Slide
previous arrow
next arrow

ರಂಜಾನ್ ಹಬ್ಬದ ನಿಮಿತ್ತ ಶಾಂತಿ ಸಭೆ

300x250 AD

ದಾಂಡೇಲಿ: ರಂಜಾನ್ ಹಬ್ಬವನ್ನು ನಗರದಲ್ಲಿ ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪೊಲೀಸ್ ಇಲಾಖೆಯ ಆಶ್ರಯದಡಿ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಪಾಲನಾ ಸಭೆಯು ಗುರುವಾರ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಿವೈಎಸ್‌ಪಿ ಶಿವಾನಂದ ಕಟಗಿ, ದಾಂಡೇಲಿಯ ಜನ ಶಾಂತಿ, ಸೌಹಾರ್ದತೆಗೆ ವಿಶೇಷವಾದ ಒತ್ತನ್ನು ಕೊಡುತ್ತಿರುವುದು ಶ್ಲಾಘನೀಯ. ಪೊಲೀಸ್ ಇಲಾಖೆಯೊಂದಿಗೆ ಅತ್ಯುತ್ತಮವಾದ ಸಂಬಂಧವನ್ನು ಇಲ್ಲಿನ ಜನತೆ ಇಟ್ಟುಕೊಂಡಿದ್ದಾರೆ. ಬರಲಿರುವ ರಂಜಾನ್ ಹಬ್ಬವನ್ನು ಅತ್ಯಂತ ಶಿಸ್ತು ಬದ್ದವಾಗಿ ಮತ್ತು ಶಾಂತಿ, ಸೌಹಾರ್ಧತೆಯಿಂದ ನಡೆಸುವಂತೆ ವಿನಂತಿಸಿದರು. ನಗರದಲ್ಲಿ ಶಾಂತಿ ಕಾಪಾಡಲು ಇಲಾಖೆಯೊಂದಿಗೆ ನಗರದ ನಾಗರೀಕರು ಕೈಜೋಡಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ನಗರದ ಜನತೆ ಮುಕ್ತವಾಗಿ ಸಂಪರ್ಕಿಸಬಹುದೆಂದು ಹೇಳಿದರು.
ಸಿಪಿಐ ಬಿ.ಎಸ್.ಲೋಕಾಪುರ ಅವರು ಮಾತನಾಡುತ್ತಾ, ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಹೋಗಿ ಬರುವಂತಹ ಸಂದರ್ಭದಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಇಲಾಖೆಯ ಜೊತೆ ಸಹಕರಿಸಬೇಕು, ನಗರದ ಜನತೆ ವರ್ಷ ಪೂರ್ತಿ ಶಾಂತಿಯುತವಾದ ವಾತವರಣವನ್ನು ನಿರ್ಮಿಸಿ, ನಮ್ಮ ಇಲಾಖೆಗೆ ಅತ್ಯುತ್ತಮ ಸಹಕಾರ ನೀಡುತ್ತಿರುವುದು ಸ್ಮರಣೀಯ. ಈ ನಿಟ್ಟಿನಲ್ಲಿ ನಗರದ ಜನತೆ ಅಭಿನಂದನೆಗೆ ಅರ್ಹರು ಎಂದು ಹೇಳಿದರು.
ಸಭೆಯಲ್ಲಿ ಮುಸ್ಲಿಂ ಮುಖಂಡರುಗಳಾದ ತಸ್ವರ್ ಸೌದಾಗರ್, ದಾದಾಪೀರ್ ನದೀಮುಲ್ಲಾ, ನವಾಜ್ ಖಾನ್, ಜಿಲಾನಿ ಬಡಿಗೇರ್ ಹಾಗೂ ಪತ್ರಕರ್ತ ಸಂದೇಶ್.ಎಸ್.ಜೈನ್ ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಗರ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ್ ಅವರು ಸ್ವಾಗತಿಸಿದರು. ಗ್ರಾಮೀಣ ಠಾಣೆಯ ಪಿಎಸೈ ಕೃಷ್ಣೆ ಗೌಡ ವಂದಿಸಿದರು. ವೇದಿಕೆಯಲ್ಲಿ ಪಿಎಸೈಗಳಾದ ಪಿ.ಬಿ.ಕೊಣ್ಣೂರು, ಶಿವಾನಂದ ನಾವದಗಿ ಉಪಸ್ಥಿತರಿದ್ದರು. ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೇಗಳು ಪ್ರಮುಖರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top