Slide
Slide
Slide
previous arrow
next arrow

ಮತದಾನ, ಮತ ಎಣಿಕೆಯ ದಿನ ಜಿಲ್ಲೆಯಾದ್ಯಂತ ‘ಮದ್ಯ’ ಬಂದ್

300x250 AD

ಕಾರವಾರ: ಮತದಾನ ಹಾಗೂ ಮತ ಎಣಿಕೆಯ ದಿನ ಜಿಲ್ಲೆಯಾದ್ಯಂತ ಎಲ್ಲಾ ವೈನ್‌ಶಾಪ್ ಮತ್ತು ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ನಿಮಿತ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮೊದಲಿನ ಅವಧಿಗೆ, ಅಂದರೆ ಮೇ 8ರಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಿಗ್ಗೆ 11 ಗಂಟೆಯವರೆಗೆ ಹಾಗೂ ಮತ ಎಣಿಕೆಯ ಮೇ 13ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 14ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲ ರೀತಿಯ ಮದ್ಯ ಮಾರಾಟ, ಸಾಗಾಟವನ್ನು ಹಾಗೂ ಅನಧಿಕೃತವಾಗಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಶೇಖರಣೆ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top