Slide
Slide
Slide
previous arrow
next arrow

ಕೆರೆಗಳ ಅಭಿವೃದ್ಧಿ ಗ್ರಾಮ ಪಂಚಾಯತ ನಿರ್ಧಾರ; ಸಚಿವ ಈಶ್ವರಪ್ಪ

300x250 AD

ಬೆಂಗಳೂರು: ಗ್ರಾಮೀಣ ಪ್ರದೇಶದ 28 ಸಾವಿರ ಕೆರೆಗಳ ಅಭಿವೃದ್ಧಿಯನ್ನು ಆಯಾ ಗ್ರಾಮ ಪಂಚಾಯತ್‍ಗಳಿಂದಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಈ ಹಿಂದೆ ಜಿಲ್ಲಾ ಪಂಚಾಯತ್‍ಗಳು ಕೆರೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್‍ಗಳೇ ಕೆರೆಗಳ ಅಭಿವೃದ್ಧಿ ಮಾಡಲಿದೆ. ಈ ಕೆಲಸಕ್ಕೆ ಗುರಿ ನಿಗದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

300x250 AD

ಕೆರೆ, ಕಲ್ಯಾಣಿಗಳ ಅಭಿವೃದ್ಧಿ, ಬದು ನಿರ್ಮಾಣ ಕಾರ್ಯಗಳನ್ನು ಸಹ ಕೈಗೊಳ್ಳಲಾಗಿದೆ. 5 ಎಕರೆ ಒಳಗಿನ ಜಮೀನಿನಲ್ಲಿ ಕೆರೆಗಳ ಅಭಿವೃದ್ಧಿ ಮಾಡುವುದರಿಂದ ತೋಟಗಾರಿಕೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಹಾಗೆಯೇ, ಮನೆ ಮನೆಗೆ ಗಂಗೆ ಯೋಜನೆಯ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ಅವರು ಹೇಳಿದ್ದಾರೆ.

Share This
300x250 AD
300x250 AD
300x250 AD
Back to top