• Slide
    Slide
    Slide
    previous arrow
    next arrow
  • ಜಿಲ್ಲೆಗೆ ಸಿದ್ದರಾಮಯ್ಯ,‌ ಪ್ರಿಯಾಂಕಾ ಗಾಂಧಿ ಆಗಮನ ನಿರೀಕ್ಷೆ

    300x250 AD

    ಕುಮಟಾ: ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮೇ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರ ಬೆನ್ನಲ್ಲೇ  ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಮುಖಂಡೆ ಪ್ರಿಯಾಂಕಾ ಗಾಂಧಿ ಸಹ ಆಗಮಿಸುವ ನಿರೀಕ್ಷೆಯಿದೆ.

    ಮುಂಡಗೋಡಿಗೆ ಮೇ 4 ರಂದು ಸಿದ್ದರಾಮಯ್ಯ ಆಗಮಿಸಿ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಜಾಧ್ವನಿ ಕಾರ್ಯಕ್ರಮ ಹಿನ್ನಲೆಯಲ್ಲಿ ಮುಂಡಗೋಡಿಗೆ ಸಿದ್ದರಾಮಯ್ಯ ಎರಡು ಬಾರಿ ಬರುವ ದಿನಾಂಕ ನಿಗದಿಯಾಗಿ ಕೊನೆಗೆ ರದ್ದಾಗಿತ್ತು. ಈ ಹಿನ್ನಲೆಯಲ್ಲಿ ಕೊನೆಗೂ ತಮ್ಮ ಪ್ರವಾಸ ನಿಗದಿ ಮಾಡಿದ್ದು ಮೇ 4ರ ಮಧ್ಯಾಹ್ನ ಬಹಿರಂಗ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ ಎನ್ನಲಾಗಿದ್ದು ಅವರ ಪ್ರವಾಸ ಪಟ್ಟಿ ಸಹ ಹೊರ ಬಿದ್ದಿದೆ.
    ಇನ್ನು ಎಐಸಿಸಿ ಮುಖಂಡೆ ಪ್ರಿಯಾಂಕ ಗಾಂಧಿ ಸಹ ಜಿಲ್ಲೆಗೆ ಆಗಮಿಸಿ ಪ್ರಚಾರದಲ್ಲಿ ತೊಡಗಲಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಪರ ಪ್ರಿಯಾಂಕ ಗಾಂಧಿ ಒಂದು ದಿನ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ಹಳಿಯಾಳ ಹಾಗೂ ಶಿರಸಿ ಕ್ಷೇತ್ರಕ್ಕೂ ಪ್ರಿಯಾಂಕ ಗಾಂಧಿ ಭೇಟಿ ನೀಡಿ ಪ್ರಚಾರ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top