Slide
Slide
Slide
previous arrow
next arrow

ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಜಾಥಾ

300x250 AD

ಯಲ್ಲಾಪುರ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಟ್ಟಣ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ಮತದಾನದ ಜಾಗೃತಿ ಜಾಥಾ ನಡೆಸಿದರು.

ಕರ್ನಾಟಕ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದಲ್ಲಿ ಮತದಾನದ ಜಾಗೃತಿ ಜಾಥಾದ ಕೈಗೊಳ್ಳಲಾಯಿತು. ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ರಾಮಕೃಷ್ಣ ಗೌಡ ನೇತೃತ್ವವನ್ನು ವಹಿಸಿದ್ದರು. ಕಾಳಮ್ಮನಗರ ಕಾಲೇಜು ಆವರಣದಿಂದ ಹೊರಟ ಜಾಥಾ, ಡಿಟಿ ರಸ್ತೆ, ತಿಲಕ್ ಚೌಕ್, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಬೆಲ್ ರಸ್ತೆ, ಹಳೆ ತರಕಾರಿ ಮಾರುಕಟ್ಟೆ ಮೂಲಕ ಕಾಲೇಜಿಗೆ ತೆರಳಿತು.
ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಿದ್ಯಾರ್ಥಿಗಳೊಂದಿಗೆ. ದೈಹಿಕ ಶಿಕ್ಷಕಿ ಅಕ್ಕುಬಾಯಿ ಗರಗದ, ಎನ್‌ಎಸ್‌ಎಸ್ ನಾಯಕ ದೀಪಕ ಭಟ್ ಕುಂಕಿ, ನಾಯಕಿ ದಿವ್ಯಾ ನಾಯ್ಕ, ವಿದ್ಯಾರ್ಥಿ ಪ್ರತಿನಿಧಿ ಗಣೇಶ ಶೆಟ್ಟಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top