ಬೆಂಗಳೂರು: ರಾಜ್ಯದಲ್ಲಿ ಆ.23 ರಿಂದ 9, 10,11 ಮತ್ತು 12 ನೇ ತರಗತಿಗಳ ಶಾಲಾರಂಭ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾರಂಭ ಮಾಡಲಾಗುವುದು. ಮಕ್ಕಳನ್ನು ಮತ್ತೆ ಶಾಲೆಗಳತ್ತ ಕರೆತರುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹಾಗೆಯೇ ಎಲ್ಲಾ ರೀತಿಯ ಕೊರೋನಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಶಾಲೆಗಳ ಆರಂಭ ಮಾಡುವುದಾಗಿ ಅವರು ಹೇಳಿದ್ದಾರೆ.
ಶಾಲಾರಂಭಕ್ಕೆ ಈಗಾಗಲೇ ತಯಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಹಲವು ರೀತಿಯ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಪೆÇೀಷಕರ ಸಮ್ಮತಿ ಪಡೆದು ಶಾಲೆಗೆ ಮಕ್ಕಳನ್ನು ಕರೆತರುವಂತೆ ಬೊಮ್ಮಾಯಿ ಸೂಚಿಸಿದ್ದಾರೆ. ಹಾಗೆಯೇ ಶಾಲೆಗಳಲ್ಲಿ ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಸುವಂತೆಯೂ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಶಾಲೆಗೆ ಬರುವ ಮಕ್ಕಳ ಮೇಲೆ ವಿಶೇಷ ನಿಗಾ ವಹಿಸುವಂತೆ ಅವರು ಪೆÇೀಷಕರಿಗೂ ಸೂಚಿಸಿದ್ದಾರೆ. ಹಾಗೆಯೇ ಪೆÇೀಷಕರು ವ್ಯಾಕ್ಸಿನ್ ಪಡೆದುಕೊಳ್ಳುವಂತೆಯೂ ಬೊಮ್ಮಾಯಿ ಮನವಿ ಮಾಡಿದ್ದಾರೆ.