Slide
Slide
Slide
previous arrow
next arrow

ಬಳ್ಳಾರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

300x250 AD

ಬಳ್ಳಾರಿ: ವಿಧಾನಸಭಾ ಚುನಾವಣೆ ಮತದಾನ ಮುಂದುವರೆದಿದ್ದು, ಮತದಾನದ ವೇಳೆ ಬಳ್ಳಾರಿ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಜೀವರಾಯನಕೋಟದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿದ್ದು, ಈ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

300x250 AD

ಚುನಾವಣೆಗೂ ಮುನ್ನ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಉಮೇಶ್ ಯಾದವ್ ಗಾಯಗೊಂಡಿದ್ದಾರೆ. ಮತದಾನದ ಹಕ್ಕು ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ದ ಉಮೇಶ್ ಅವರನ್ನು ಬಿಜೆಪಿ ಕಾರ್ಯಕರ್ತರು ತಡೆದರು. ಇದು ವಾಗ್ವಾದಕ್ಕೆ ಕಾರಣವಾಗಿ ಹಲ್ಲೆ ನಡೆಸಿದ್ದಾರೆ. ಉಮೇಶ್ ಮೇಲೆ ಹಲ್ಲೆಯಾಗುತ್ತಿರುವ ವಿಷಯ ತಿಳಿದ ಹಲವು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಹಲ್ಲೆಯಿಂದ ಉಮೇಶ್ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This
300x250 AD
300x250 AD
300x250 AD
Back to top