• Slide
    Slide
    Slide
    previous arrow
    next arrow
  • ದೇಶಪಾಂಡೆಗೆ ಮುಖ್ಯಮಂತ್ರಿ ಪದವಿ ನೀಡುವಂತೆ ಆರ್.ಪಿ.ನಾಯ್ಕ ಮನವಿ

    300x250 AD

    ದಾಂಡೇಲಿ: 9ನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿರುವ ಆರ್.ವಿ.ದೇಶಪಾಂಡೆಯವರಿಗೆ ಈ ಬಾರಿ ಮುಖ್ಯಮಂತ್ರಿ ಪದವಿ ನೀಡುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಆರ್.ಪಿ.ನಾಯ್ಕ ಅವರು ರಾಜ್ಯದ ಕೆಪಿಸಿಸಿ ಮತ್ತು ಎಐಸಿಸಿಗೆ ಮನವಿ ಮಾಡಿದ್ದಾರೆ.
    ಅಭಿವೃದ್ಧಿಗೆ ಮತ್ತೊಂದು ಹೆಸರೆ ಆರ್.ವಿ.ದೇಶಪಾಂಡೆಯವರು. ಅವರ ದೂರದೃಷ್ಟಿ ಯೋಜನೆಗಳು, ಅಭಿವೃದ್ಧಿಪರ ಚಿಂತನೆಗಳ ಫಲವಾಗಿ 9 ಬಾರಿ ಗೆಲುವು ಸಾಧಿಸಿದ್ದಾರೆ. ರಾಜ್ಯದ ಬಿಜೆಪಿ ಸರಕಾರ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ನಾಡು ಕಂಡ ಮುತ್ಸದ್ದಿ ರಾಜಕಾರಣಿಯಾದ ದೇಶಪಾಂಡೆಯವರಿಗೆ ಈ ಬಾರಿ ಮುಖ್ಯಮಂತ್ರಿ ಪದವಿಯನ್ನು ನೀಡಿ, ನಾಡಿನ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಲು ಮಹತ್ವದ ಅವಕಾಶವನ್ನು ಕಾಂಗ್ರೆಸ್ ಪಕ್ಷ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top