• Slide
    Slide
    Slide
    previous arrow
    next arrow
  • ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳವರೆಗೆ ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ತಂದೆ- ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ನೀಡಿರಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು 18 ರಿಂದ 33 ಹಾಗೂ ಇತರೆ ಅಭ್ಯರ್ಥಿಗಳು 18 ರಿಂದ 30 ವಯೋಮಾನದವರಾಗಿರಬೇಕು.
    ಆಸಕ್ತರು ಆರ್ಜಿ ನಮೂನೆಯನ್ನು ಇಲಾಖೆ ವೆಬ್ ಸೈಟ್: https://horticulturedir.karnataka.gov.inನಲ್ಲಿ ಅಥವಾ ತೋಟಗಾರಿಕೆ ಇಲಾಖೆಗಳಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮೇ 22ರೊಳಗೆ ತರಬೇತಿ ಕೇಂದ್ರ, ಹೊಸರು, ಸಿದ್ದಾಪುರ ಅಥವಾ ಸಂಬoಧಿಸಿದ ತೋಟಗಾರಿಕೆ ಇಲಾಖೆಗೆ ಸಲ್ಲಿಸಬೇಕು. ಮೇ 25ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ನಡೆಸಲಾಗುವುದು.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: tel:+9108384226427ಗೆ ಸಂಪರ್ಕಿಸಿ ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top