Slide
Slide
Slide
previous arrow
next arrow

ಲೋಕಸಭಾ ಚುನಾವಣೆ: ರಾಷ್ಟ್ರೀಯ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಎಂದ ಆನಂದ್ ಅಸ್ನೋಟಿಕರ್

300x250 AD

ಕಾರವಾರ: ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದು, ರಾಷ್ಟ್ರೀಯ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನಾನು ಗಂಭೀರ ಆಕಾಂಕ್ಷಿ. ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ಹಿಂದುಳಿದವರಿಗೆ ಅವಕಾಶ ಸಿಕ್ಕಿಲ್ಲ. ನಾನೊಬ್ಬ ಹಿಂದುಳಿದವನಾಗಿ ಅವಕಾಶಕ್ಕಾಗಿ ಈ ಬಾರಿ ಸ್ಪರ್ಧಿಸುತ್ತಿದ್ದೇನೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಲೋಕಸಭಾ ಕ್ಷೇತ್ರದ ಎಲ್ಲಾ ಶಾಸಕರಿಗೆ ಅಭಿನಂದಿಸುವೆ. ಪಕ್ಷಾತೀತವಾಗಿ ನಾವೆಲ್ಲ ಕ್ಷೇತ್ರದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ರಾಜಕಾರಣ ಮಾಡೋಣ. ಅಭಿವೃದ್ಧಿಗಾಗಿ ನಾನು ಈ ಎಲ್ಲಾ ಶಾಸಕರೊಂದಿಗೆ ಸದಾ ಕಾಲ ಬೆಂಬಲವಾಗಿರುತ್ತೇನೆ. ಬರುವ ದಿನಗಳಲ್ಲಿ ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆಯಾಗಿ ನನ್ನ ಲೋಕಸಭಾ ಕ್ಷೇತ್ರದ ಕಾರ್ಯವ್ಯಾಪ್ತಿಯಲ್ಲಿ ಪ್ರಚಾರ, ಪ್ರವಾಸ ಶುರು ಮಾಡುತ್ತೇನೆ. ಎಲ್ಲಾ ಕ್ಷೇತ್ರದಲ್ಲೂ ನನ್ನ ಕಾರ್ಯಕರ್ತರಿದ್ದಾರೆ. ಅವರ ಅಭಿಪ್ರಾಯ ಪಡೆದು ಯಾವ ಪಕ್ಷವೆಂದು ತೀರ್ಮಾನ ಕೈಗೊಂಡು ಸೇರ್ಪಡೆಯಾಗುತ್ತೇನೆ ಎಂದರು.

300x250 AD
Share This
300x250 AD
300x250 AD
300x250 AD
Back to top