• Slide
    Slide
    Slide
    previous arrow
    next arrow
  • ಚರಂಡಿ ಸಮಸ್ಯೆಗೆ ನಗರಸಭೆ ಸ್ಪಂದನೆ

    300x250 AD

    ದಾಂಡೇಲಿ: ನಗರದ ಕೋರ್ಟ್ ಮುಂಭಾಗದ ರಸ್ತೆಯ ಬದಿಯಲ್ಲಿರುವ ಚರಂಡಿಯಂತೂ ಅಸ್ವಚ್ಚತೆಯಿಂದ ಗಬ್ಬು ನಾರುತ್ತಿದ್ದು, ಈ ಬಗ್ಗೆ ನಗರಸಭೆಯ ಪೌರಾಯುಕ್ತ ಆರ್.ಎಸ್.ಪವಾರ್ ಅವರಿಗೆ ಸ್ಥಳೀಯರು ಗಮನಕ್ಕೆ ತಂದಿದ್ದರು.
    ಸ್ಥಳೀಯರ ಮನವಿಗೆ ಸ್ಪಂದಿಸಿದ ಪೌರಾಯುಕ್ತ ಆರ್.ಎಸ್.ಪವಾರ್ ಅವರು ತಮ್ಮ ಆರೋಗ್ಯ ನಿರೀಕ್ಷಕರಾದ ವಿಲಾಸ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ, ಪೌರಕಾರ್ಮಿಕರ ಮೂಲಕ ಗಟಾರ ಒಡೆದು ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳುವುದರ ಮೂಲಕ ಹಲವು ದಿನಗಳಿಂದ ಇದ್ದಂತಹ ಸಮಸ್ಯೆಯನ್ನು ಬಗೆಹರಿಸಿದ್ದಾರೆ.
    ಮನವಿಗೆ ತಡವರಿಯದೆ ಸ್ಪಂದಿಸಿದ ಪೌರಾಯುಕ್ತ ಆರ್.ಎಸ್.ಪವಾರ್ ಅವರ ಕರ್ತವ್ಯ ಬದ್ಧತೆಗೆ ಮೆಚ್ಚುಗೆ ವ್ಯಕ್ತವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top