• Slide
    Slide
    Slide
    previous arrow
    next arrow
  • ಜಿ.ಪರಮೇಶ್ವರಗೆ ಡಿಸಿಎಂ ಹುದ್ದೆ ನೀಡಲು ಆಗ್ರಹ

    300x250 AD

    ಶಿರಸಿ: ರಾಜ್ಯದ ಕಾಂಗ್ರೆಸ್ ಸರ್ಕಾರದ ರಚನೆಯ ಸಂದರ್ಭದಲ್ಲಿ ಜಿ.ಪರಮೇಶ್ವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬಿ.ಶಿವಾಜಿ ಆಗ್ರಹಿಸಿದ್ದಾರೆ.
    ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್ 2013ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರಕ್ಕೆ ಏರಿತ್ತು. ಆದರೆ ಆಗಲೂ ಅವರಿಗೆ ಅಧಿಕಾರ ಸಿಕ್ಕಿರಲಿಲ್ಲ. ನಂತರ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಕ್ಕೂ ಸಿಕ್ಕರೂ ಕಡಿಮೆ ಅವಧಿಯಾಗಿತ್ತು. ಇದರಿಂದ ಈ ಬಾರಿ ಅಧಿಕಾರಕ್ಕೆ ಬರಲೂ ಸಹ ತಮ್ಮದೇ ಕೊಡುಗೆ ನೀಡಿರುವ ದಲಿತ ನಾಯಕ ಪರಮೇಶ್ವರ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಶಿವಾಜಿ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top