Slide
Slide
Slide
previous arrow
next arrow

ಸೈಲ್‌ಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹ

300x250 AD

ಕಾರವಾರ: ಕ್ಷೇತ್ರದ ಶಾಸಕ ಸತೀಶ್ ಸೈಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕಾರವಾರ ಕಾಂಗ್ರೆಸ್ ಯುವ ಮುಖಂಡ ನೂತನ ಜೈನ್ ಮತ್ತು ಗೆಳೆಯರ ಬಳಗದವರು ಆಗ್ರಹಿಸಿದ್ದಾರೆ.
ಸತೀಶ್ ಸೈಲ್ ತಮ್ಮ ಮೊದಲ ಅವಧಿಯಲ್ಲಿ ಶಾಸಕರಾದ ಸಂದರ್ಭದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಸೇತುವೆ ಸರದಾರ ಎಂದೇ ಖ್ಯಾತಿ ಪಡೆದಿದ್ದರು. ಜತೆಗೆ ಹಳ್ಳಿ ಹಳ್ಳಿಯಲ್ಲಿ ಸಂಪರ್ಕ ರಸ್ತೆ ಕಲ್ಪಿಸಿಕೊಡುವಲ್ಲಿ ಅವಿರತ ಪ್ರಯತ್ನ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಈಗ ಎರಡನೇ ಅವಧಿಗೆ ಶಾಸಕರಾಗಿದ್ದು, ಮತ್ತಷ್ಟು ಅಭಿವೃದ್ಧಿ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಆಗುವ ಸಾಧ್ಯತೆ ಇದೆ ಎಂದು ನೂತನ್ ಜೈನ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top