Slide
Slide
Slide
previous arrow
next arrow

ಶಾಸಕ ಸೈಲ್‌ಗೆ ಮಂತ್ರಿ ಸ್ಥಾನ ನೀಡಲಿ: ರಾಘು ನಾಯ್ಕ

300x250 AD

ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಸತೀಶ್ ಸೈಲ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಸೈಲ್ ಅವರು ಎಲ್ಲಾ ಸಮುದಾಯವನ್ನು ಒಗ್ಗೂಡಿಸಿಕೊಂಡು ಕಾಂಗ್ರೆಸ್‌ನಿಂದ ವಿಜಯಿಯಾಗಿದ್ದಾರೆ. ಹಗಲು- ರಾತ್ರಿ ಎನ್ನದೇ ಮಹಿಳೆಯರು- ಯುವಕರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಕಟ್ಟಿ ಬೆಳೆಸುವಲ್ಲಿ ಅವಿರತವಾಗಿ ಶ್ರಮಿಸಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಹೇಳಿದರು.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ, ಮಲ್ಲಿಕಾರ್ಜುನ್ ಖರ್ಗೆ ಸೈಲ್ ಅವರು ಮಾಡಿದ ಸೇವೆಯನ್ನು ಪರಿಗಣಿಸಬೇಕು. ಈ ಬಾರಿ ಮಂತ್ರಿ ಸ್ಥಾನ ಅವರಿಗೆ ಸಿಕ್ಕರೆ ಮುಂದೆ ಕಾಂಗ್ರೆಸ್ ಪಕ್ಷಕ್ಕೂ ಅನುಕೂಲವಾಗಲಿದೆ. ಎಲ್ಲಾ ಸಮಾಜದವರೂ ಸೈಲ್ ಅವರನ್ನು ಮಂತ್ರಿಯಾಗಿ ಮಾಡಬೇಕು ಎಂದು ಪಕ್ಷಕ್ಕೆ ಆಗ್ರಹಿಸುತ್ತಿದ್ದಾರೆ ಎಂದರು.

300x250 AD
Share This
300x250 AD
300x250 AD
300x250 AD
Back to top