• Slide
    Slide
    Slide
    previous arrow
    next arrow
  • ಈಜಲು ತೆರಳಿದ್ದ ಯುವಕ ನೀರುಪಾಲು: ಪ್ರಕರಣ ದಾಖಲು

    300x250 AD

    ಹೊನ್ನಾವರ: ತಾಲೂಕಿನ ಕಾಸರಕೋಡ ಬ್ಲೂಫ್ಲ್ಯಾಗ್ ಮಾನ್ಯತೆ ಪಡೆದಿರುವ ಇಕೋ ಬೀಚ್ ಸಮೀಪ ಸಮುದ್ರದಲ್ಲಿ ಈಜಲು ತೆರಳಿದ್ದ ಯುವಕನೋರ್ವ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

    ಮೈಸೂರು ಮಹಾಜನ್ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆ ಮೂಡಗೇರಿಯ ನಿವಾಸಿ ಮಧ್ವರಾಜ ಟಿ.ಸಿ. ನಾಪತ್ತೆಯಾದವ. ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ರೈಲಿನಲ್ಲಿ ಹೊನ್ನಾವರಕ್ಕೆ ಆಗಮಿಸಿದ್ದರು. ನಂತರ ಇಕೋ ಬೀಚ್ ವೀಕ್ಷಿಸಲು ಆಗಮಿಸಿದಾಗ ಈ ಘಟನೆ ನಡೆದಿದೆ.

    300x250 AD

    ಯುವಕ ಸಮುದ್ರದಲ್ಲಿ ಮುಳುಗುತ್ತಿದ್ದಾಗ ಇತರ ಸ್ನೇಹಿತರು ಸಹಾಯ ಯಾಚಿಸುತ್ತಿದ್ದು, ಲೈಫ್‌ಗಾರ್ಡ್ ಸಿಬ್ಬಂದಿಗಳು ಹೋಗುವ ಪೂರ್ವದಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಾಹ್ನ ಟೊಂಕಾ ಸಮೀಪ ಶವವಾಗಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ, ಪೋಲಿಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top