• Slide
    Slide
    Slide
    previous arrow
    next arrow
  • ಹಂಗಾಮಿ ಸ್ಪೀಕರ್ ಆಗಿ ಆರ್.ವಿ. ದೇಶಪಾಂಡೆ ಪ್ರಮಾಣ ವಚನ ಸ್ವೀಕಾರ

    300x250 AD

     ಬೆಂಗಳೂರು: ರಾಜ್ಯ ವಿಧಾನ ಸಭೆಯ ಹಂಗಾಮಿ ಸ್ಪೀಕರ್ ಆಗಿ ಹಿರಿಯ ಶಾಸಕ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಆರ್.ವಿ.ದೇಶಪಾಂಡೆ ಸೋಮವಾರ ಬೆಳಿಗ್ಗೆ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಉಪಸ್ಥಿತರಿದ್ದರು. 9ನೇ ಬಾರಿಗೆ ಆಯ್ಕೆಯಾಗಿರುವ ಆರ್.ವಿ.ದೇಶಪಾಂಡೆ ಸದನದಲ್ಲಿ ಹಿರಿಯ ಸದಸ್ಯರಾಗಿರುವುದರಿಂದ ನಿಯಾಮವಳಿಯಂತೆ ಹಿರಿಯ ಶಾಸಕರನ್ನು ಸದನದ ಹಂಗಾಮಿ ಸಭಾಧ್ಯಕ್ಷರನ್ನಾಗಿಸುವುದು ಸಂಪ್ರದಾಯ. ಈ ಹಿನ್ನಲೆಯಲ್ಲಿ ಆರ್.ವಿ.ದೇಶಪಾಂಡೆಯವರನ್ನು ಸಹಜವಾಗಿ ಹಂಗಾಮಿ ಸ್ಪೀಕರನ್ನಾಗಿ ಆಯ್ಕೆ ಮಾಡಲಾಗಿತ್ತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top