Slide
Slide
Slide
previous arrow
next arrow

ಮೇ.26ಕ್ಕೆ‌ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ

300x250 AD

ಶಿರಸಿ: ಕನ್ನಡ ಸಾಹಿತ್ಯ ಪರಿಷತ್ ಶಿರಸಿ ತಾಲೂಕು ಘಟಕದ ಆಶ್ರಯದಲ್ಲಿ ದಿ. ಶೇಷಗಿರಿರಾವ್ ನಾರಾಯಣರಾವ್ ಕೇಶವೈನ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮವನ್ನು ಮೇ.26 ಸಂಜೆ 4.30ಕ್ಕೆ ಇಲ್ಲಿನ ನೆಮ್ಮದಿ ಕುಟೀರದಲ್ಲಿ ಆಯೋಜಿಸಲಾಗಿದೆ.

ದತ್ತಿನಿಧಿ ಉಪನ್ಯಾಸವನ್ನು ಶಿಕ್ಷಣ ತಜ್ಞ ಫ್ರೊ.ಕೆ.ಎನ್. ಹೊಸ್ಮನಿ ನೀಡಲಿದ್ದು, ಶಿರಸಿ ತಾಲೂಕು ಕಸಾಪ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿರಸಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಜಯದೇವ ನಿಲೇಕಣಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ ಕುಮಟಾ, ಕಸಾಪ ಜಿಲ್ಲಾ ಸಂಘಸಂಸ್ಥೆಗಳ ಪ್ರತಿನಿಧಿ ಡಾ. ವೆಂಕಟೇಶ ನಾಯ್ಕ, ನಿವೃತ್ತ ಪ್ರಾಚಾರ್ಯ ಡಾ. ಜಿ.ಎ. ಹೆಗಡೆ ಸೋಂದಾ ಉಪಸ್ಥಿತರಿರುವರು ಎಂದು ಶಿರಸಿ ಕಸಾಪ ಗೌರವ ಕೋಶಾಧ್ಯಕ್ಷ ವಿ.ಆರ್. ಹೆಗಡೆ ಮತ್ತಿಘಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top