Slide
Slide
Slide
previous arrow
next arrow

RSS ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸೂಚನೆ ನೀಡಿದ ಕಾಂಗ್ರೆಸ್

300x250 AD

ಬೆಂಗಳೂರು: ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಟ್ವೀಟ್ ಮಾಡಿದೆ.
‘ಆರೆಸ್ಸೆಸ್ ನಿಷೇಧಕ್ಕೆ ಕೈಹಾಕಿದರೆ ಕಾಂಗ್ರೆಸ್ ಇರಲ್ಲ’ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ‘ಭಾರತದಲ್ಲಿ ಆರೆಸ್ಸೆಸ್ ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು’ ಎಂದು ತಿರುಗೇಟು ನೀಡಿದೆ.
‘ಸರ್ದಾರ್ ಪಟೇಲರೆ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ’ ಎಂದು ಕಾಂಗ್ರೆಸ್ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top