ಶಿರಸಿ: ಸೋಂದಾ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ವರ್ಧಂತಿ ಉತ್ಸವದ ನಿಮಿತ್ತ ನಡೆದ ರಕ್ತದಾನ ಶಿಬಿರದಲ್ಲಿ 30ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.
ಶ್ರೀಗಳು 16 ವರ್ಷಗಳಿಂದ ರಕ್ತದಾನ ಶಿಬಿರವನ್ನು ನಡೆಸಿಕೊಂಡು ಬಂದಿರುತ್ತಾರೆ. 60ಕ್ಕೂ ಜನ ಉಚಿತ ತಪಾಸಣೆ ಪ್ರಯೋಜನ ಪಡೆದುಕೊಂಡಿದ್ದು, ಅವರಿಗೆ ಉಚಿತ ಔಷಧಿ ವಿತರಣೆ ಸಹ ನಡೆಯಿತು. ಟಿಎಸ್ಎಸ್ ಆಸ್ಪತ್ರೆಯ ವೈದ್ಯರುಗಳಾದ ಡಾ.ಸುಮನ್, ಡಾ.ಪಿ.ಎಸ್.ಹೆಗಡೆ, ಡಾ.ಸ್ವಾತಿ ನಾಡಿಗೇರ, ಡಾ.ಪ್ರಶಾಂತ ಎಸ್.ಪಾಟೀಲ್ ಡಾ.ಆಶಿಶ್ ವಿ.ಜನ್ನು ಹಾಗೂ ಸಿಬ್ಬಂದಿಗಳು ಮತ್ತು ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳ ಸಹಕಾರದಲ್ಲಿ ರಕ್ತದಾನ ಹಾಗೂ ಉಚಿತ ತಪಾಸಣೆ ಶಿಬಿರವು ಯಶಸ್ವಿಯಾಗಿ ನೇರವೇರಿತು.
ಈ ಕಾರ್ಯಕ್ರಮದಲ್ಲಿ ಗ್ರಾಮಾಭ್ಯುದಯ ಕಾರ್ಯದರ್ಶಿ ಸಂತೋಷ ಭಟ್, ಕೋಡಿಗಾರ, ಸದಸ್ಯರಾದ ಗುರುಪಾದ ಹೆಗಡೆ ಎಲ್ಲೆಕೊಪ್ಪ, ಶ್ರೀಧರ ಭಟ್ ಕಳವೆ, ರವಿ ದೇವ ಬೆಳಲೆ, ಎಂ.ಕೆ. ಹೆಗಡೆ ಗೋಳಿಕೊಪ್ಪ, ಕೃಷಿ ಪ್ರತಿಷ್ಠಾನದ ಅಧ್ಯಕ್ಷ ಆರ್.ಎನ್.ಹೆಗಡೆ ಉಳ್ಳಿಕೊಪ್ಪ, ರಮೇಶ ಹೆಗಡೆ ದೊಡ್ನಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸ್ವರ್ಣವಲ್ಲಿಯಲ್ಲಿ ರಕ್ತದಾನ ಶಿಬಿರ ಸಂಪನ್ನ
![](https://euttarakannada.in/wp-content/uploads/2023/05/29kar16-2-730x438.jpg?v=1685429210)