• Slide
    Slide
    Slide
    previous arrow
    next arrow
  • ಅಪಾಯಕ್ಕೆ ಸಿಲುಕಿದ ಇಬ್ಬರು ಬಾಲಕರ ರಕ್ಷಣೆ

    300x250 AD

    ಗೋಕರ್ಣ: ಇಲ್ಲಿಯ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ಅಪಾಯಕ್ಕೆ ಸಿಲುಕಿದನ್ನು ಗಮನಿಸಿದ ಲೈಫ್‌ಗಾರ್ಡಗಳು ಅವರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.
    ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಯಾನ್ ಖಾನ್ (13), ಸುಭಾನ್ ಖಾನ್ (12) ಇವರು ರಕ್ಷಣೆಗೊಳಗಾದವರಾಗಿದ್ದಾರೆ. ಇವರು ಸೊರಬದಿಂದ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜಾಡುವ ಸಂದರ್ಭದಲ್ಲಿ ನೀರಿನ ಅಲೆಗೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ಇವರನ್ನು ಗಮನಿಸಿದ ಲೈಫ್ ಗಾರ್ಡ್ ಗಳಾದ ಮೋಹನ ಅಂಬಿಗ, ಶಿವಪ್ರಸಾದ ಅಂಬಿಗ, ಲೋಕೇಶ ಹರಿಕಂತ್ರ, ಬೀಚ್ ವ್ಯವಸ್ಥಾಪಕ ರವಿ ನಾಯ್ಕ, ರಾಜೇಶ ಇತರರು ರಕ್ಷಣೆಗೆ ತೊಡಗಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top