Slide
Slide
Slide
previous arrow
next arrow

ಭೀಮಣ್ಣ ಬಿಜೆಪಿ ಸರ್ಕಾರದ ಅವಧಿಗಿಂತ ಹೆಚ್ಚು ಅಭಿವೃದ್ಧಿ ಮಾಡಿ ತೋರಿಸಲಿ: ಕಾಗೇರಿ ಸವಾಲು

300x250 AD

ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ್ ಬಿಜೆಪಿ ಸರ್ಕಾರ ಮಂಜೂರುಗೊಳಿಸಿದ ಕಾಮಗಾರಿ ಮಾಡುವುದರ ಜೊತೆಗೆ ಈಗಿನ ಅನುದಾನಕ್ಕಿಂತ ಹೆಚ್ಚಿನ ಅನುದಾನ, ಯೋಜನೆ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಲಿ ಎಂದು ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸವಾಲೆಸೆದಿದ್ದಾರೆ.

ಪಟ್ಟಣದ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದಂತಹ ೫ ಗ್ಯಾರಂಟಿಗಳನ್ನೂ ಈಡೇರಿಸಬೇಕೆಂದು ಆಗ್ರಹಿಸಿದರು. ಬಿಜೆಪಿಯ ಮುಖವಾಡ ಹಾಕಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದವರ ಮೇಲೆ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳುವಂತೆ ಸಭೆಯ ಮೂಲಕ ಆಗ್ರಹಿಸಿದರು. ನೂತನ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಶುಭಕೋರಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸಹಕಾರ ಯಾವತ್ತು ಇರುತ್ತದೆ ಎಂದರು.

300x250 AD

ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಯನ್ನು ಮಂಡಲ ಅಧ್ಯಕ್ಷ ಮಾರುತಿ ನಾಯ್ಕ್ ಹೊಸೂರ್ ನೆರವೇರಿಸಿದರು. ನಂತರ ಪಕ್ಷದ ಕಾರ್ಯಕರ್ತರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ವಿಭಾಗ ಸಹ ಪ್ರಭಾರಿ ಆರ್.ಡಿ.ಹೆಗಡೆ ಜಾನ್ಮನೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ರವಿ ಹೆಗಡೆ ಹೂವಿನಮನೆ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ತೋಟಪ್ಪ ನಾಯ್ಕ, ಜಿಲ್ಲಾ ಸಮಿತಿಯ ಗುರುರಾಜ ಶಾನಭಾಗ್ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top