Slide
Slide
Slide
previous arrow
next arrow

ಕವಲಕ್ಕಿಯ ಭಾರತೀ ಶಾಲೆಯಲ್ಲಿ ಪ್ರೇರಣಾ ಶಿಬಿರ

300x250 AD

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿವಮೊಗ್ಗದ ತರಬೇತುದಾರ ಧ್ರುವ ಅಪ್ಪು ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರವನ್ನು ನಡೆಸಿಕೊಟ್ಟರು.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆದ ಶಿಬಿರದಲ್ಲಿ  ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ವಿಫಲ ಅವಕಾಶವಿದೆ. ಈ ಹಂತದಲ್ಲಿ ನಡೆಯುವ ಪರೀಕ್ಷೆ ಎದುರಿಸಲು ಆರಂಭದಿಂದಲೂ ಸಜ್ಜಾಗಬೇಕು. ಶೈಕ್ಷಣಿಕ ಪಠ್ಯದ ಜೊತೆ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯವನ್ನು ಅಧ್ಯಯನ ಮಾಡುವಂತೆ ಸಲಹೆ ನೀಡಿದರು.

300x250 AD

ಶಾಲೆಯ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರೇರಣಾ ಶಿಬಿರದ ವಿವಿಧ ಚಟುವಟಿಕೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಆಡಳಿತಾಧಿಕಾರಿ ಎಂ.ಎ¸.ಹೆಗಡೆ ಗುಣವಂತೆ, ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್ ಹಾಗೂ ಶಿಕ್ಷಕ- ಶಿಕ್ಷಕಿಯರು ಉಪಸ್ಥಿತರಿದ್ದರು. ಶಿಕ್ಷಕಿ ರೇಷ್ಮಾ ಜೊಗಳೇಕರ್ ಸ್ವಾಗತಿಸಿ ವಂದಿಸಿದರು.

Share This
300x250 AD
300x250 AD
300x250 AD
Back to top