ಕಾರವಾರ: ನಗರದ ಬಿ.ವಿ ರೆಸಿಡೆನ್ಸಿಯೊಂದರಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಅನಂತಪುರ ಮೂಲದ ಪಿ.ಮಾರುತಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಮೂರು ದಿನದ ಹಿಂದೆ ನಂಗರದ ಬಿ.ವಿ ಲಾಡ್ಜ್ ನಲ್ಲಿ ರೂಂ ಒಂದನ್ನು ಬಾಡಿಗೆ ಪಡೆದುಕೊಂಡಿದ್ದ. ರವಿವಾರ ರಾತ್ರಿ ಅಥವಾ ಮಧ್ಯಾಹ್ನದ ಹೊತ್ತಿಗೆ ಈತ ಮಾಡಿಕೊಂಡಿರಬಹುದೆಂದು ಪೊಲೀಸರು ತನಿಖೆಯಲ್ಲಿ ಊಹಿಸಿದ್ದಾರೆ. ತಾನು ವಾಸವಿದ್ದ ರೂಂ ನ ಫ್ಯಾನಿಗೆ ನೇಣು ಬಿದುಕೊಂಡ ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ. ಈ ಬಗ್ಗೆ ಲಾಡ್ಜ್ ಸಿಬ್ಬಂದಿಗಳಿಗೆ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.