Slide
Slide
Slide
previous arrow
next arrow

ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಗೆ ದೇಣಿಗೆ ನೀಡಿದ ಡಾ. ಕಲಾ ಭಟ್

300x250 AD

ಶಿರಸಿ: ಖ್ಯಾತ ಪ್ರಸೂತಿ ತಜ್ಞೆ ಡಾ. ಕಲಾ ಭಟ್ ಶಿರಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿಯು ಶಿರಸಿ ಲಯನ್ಸ ಶಾಲೆಗಳ ಮೂಲಕ ನಡೆಸುತ್ತಿರುವ ಉತ್ತಮ ಶೈಕ್ಷಣಿಕ ಸೇವಾ ಕಾರ್ಯಚಟುವಟಿಕೆಗಳನ್ನು ಮೆಚ್ಚಿ ಒಂದು ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ದೇಣಿಗೆ ಚೆಕ್‌ನ್ನು ಶಿರಸಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಂ.ಜೆ.ಎಫ್.ಲ. ತ್ರಿವಿಕ್ರಮ ಪಟವರ್ಧನ್‌ರವರು ಶಿರಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಲಯನ್ ಪ್ರೊ. ಎನ್.ವಿ.ಜಿ. ಭಟ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಿರಸಿ ಲಯನ್ಸ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷರಾದ ಎಂ.ಜೆ.ಎಫ್ ಲಯನ್ ಪ್ರಭಾಕರ ಹೆಗಡೆ, ಕಾರ್ಯದರ್ಶಿಗಳಾದ ಲಯನ್ ಪ್ರೊ.ರವಿ ನಾಯಕ್, ಕೋಶಾಧ್ಯಕ್ಷರಾದ ಎಂ.ಜೆ.ಎಫ್ ಲಯನ್ ಉದಯ ಸ್ವಾದಿ, ಶಿರಸಿ ಲಯನ್ಸ ಕ್ಲಬ್ ಕಾರ್ಯದರ್ಶಿಗಳಾದ ಲಯನ್ ರಮಾ ಪಟವರ್ಧನ್ ಹಾಗೂ ಶಿರಸಿ ಲಯನ್ಸ ಕ್ಲಬ್ ಸದಸ್ಯರುಗಳ ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top