Slide
Slide
Slide
previous arrow
next arrow

ಮಹಿಳೆಯ ಜೀವ ಉಳಿಸಿದ್ದ ಪೊಲೀಸರಿಗೆ ಸನ್ಮಾನ

300x250 AD

ದಾಂಡೇಲಿ: ನಗರದ ಹಳೆದಾಂಡೇಲಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ನಗರ ಪೊಲೀಸ್ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ್ ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ನಾ) ತಾಲ್ಲೂಕು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಪಿಎಸೈ ಐ.ಆರ್.ಗಡ್ಡೇಕರ್, ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ಡಿವೈಎಸ್ಪಿ ಮತ್ತು ಸಿಪಿಐ ಯವರ ಸಕಾಲಿಕ ಮಾರ್ಗದರ್ಶನದಡಿಯಲ್ಲಿ ಶಾಂತಿಯುತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ನಮ್ಮ ಕೆಲಸವನ್ನು ಮೆಚ್ಚಿ ಸನ್ಮಾನಿಸಿರುವುದು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾ) ತಾಲ್ಲೂಕು ಘಟಕದ ಅಧ್ಯಕ್ಷ ಸಾಧಿಕ್ ಮುಲ್ಲಾ ಹಾಗೂ ಸಂಘಟನೆಯ ಪದಾಧಿಕಾರಿಗಳು, ಸಂಘಟನೆಯ ಮಹಿಳಾ ಘಟಕದ ಪದಾಧಿಕಾರಗಳು, ಕಾರ‍್ಯಕರ್ತೆಯರು ಮತ್ತು ಕಾರ‍್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top