Slide
Slide
Slide
previous arrow
next arrow

ಹಾಲು ಸಂಘಗಳ ಸ್ವಂತ ಕಟ್ಟಡಕ್ಕೆ ಜಿ.ಪಂ., ರಾಜ್ಯ ಸರ್ಕಾರ ಅನುದಾನ ನೀಡಲಿ: ಸುರೇಶ್ಚಂದ್ರ ಕೆಶಿನ್ಮನೆ

300x250 AD

ಶಿರಸಿ: ಕರ್ನಾಟಕ ಹಾಲು ಮಹಾ ಮಂಡಳಿ ಬೆಂಗಳೂರಿನ ವತಿಯಿಂದ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ತಾಲೂಕಿನ ಚಿಕ್ಕಬೆಂಗಳೆ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ರೂ. 5 ಲಕ್ಷ ಅನುದಾನ ಮಂಜೂರಾಗಿದ್ದು, ಕಟ್ಟಡದ ಅನುದಾನದ ಮೊದಲ ಹಂತದ ರೂ. 2.50 ಲಕ್ಷ ಮೊತ್ತದ ಚೆಕ್‌ನ್ನು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ವಿತರಿಸಿದರು.

ನಂತರ ಮಾತನಾಡಿದ ಅವರು ನಮ್ಮ ಜಿಲ್ಲೆಯ ಎಲ್ಲ ಸಂಘಗಳು ಸ್ವಂತ ಕಟ್ಟಡ ಹೊಂದುವಂತೆ ಮಾಡುವುದು ಮುಖ್ಯ ಗುರಿಯಾಗಿದ್ದು, ಜಿಲ್ಲೆಯಲ್ಲಿ ಶೇ.50 ರಷ್ಟು ಸಂಘಗಳು ಮಾತ್ರ ಸ್ವಂತ ಕಟ್ಟಡವನ್ನು ಹೊಂದಿವೆ. ಸಂಘದ ಅಗತ್ಯ ಪಿಠೋಪಕರಣಗಳನ್ನು ಹೊಂದಿಸಿಡಲು, ಪಶು ಆಹಾರ ದಾಸ್ತಾನು ಮಾಡಲು, ರೈತರಿಂದ ಹಾಲನ್ನು ಖರೀದಿಸಲು ಹಾಗೂ ಸಂಘದ ಆಡಳಿತ ಮಂಡಳಿಯ ಸಭೆಗಳನ್ನು ನಡೆಸಲು ಪ್ರತಿಯೊಂದು ಸಂಘಕ್ಕೂ ಸ್ವಂತ ಕಟ್ಟಡ ಹೊಂದುವ ಅನಿವಾರ್ಯತೆ ಇದೆ ಎಂದರು.

ಈ ಹಿಂದೆ ಜಿಲ್ಲಾ ಪಂಚಾಯತಿ ವತಿಯಿಂದ ಹಾಲು ಸಂಘಗಳಿಗೆ ಸ್ವಂತ ಕಟ್ಟಡ ಹೊಂದಲು ಅನುದಾನ ಸಿಗುತ್ತಿತ್ತು, ನಂತರದ ದಿನಗಳಲ್ಲಿ ಅನುದಾನ ನೀಡುವುದನ್ನು ನಿಲ್ಲಿಸಲಾಯಿತು. ಜಿಲ್ಲೆಯ ಹೈನುಗಾರರಿಗೆ ಅನಕೂಲವಾಗುವಂತೆ ಹಾಲು ಸಂಘಗಳಿಗೆ ಸ್ವಂತ ಕಟ್ಟಡ ಹೊಂದಲು ಅನುದಾನ ನೀಡುವ ಬಗ್ಗೆ ಅನೇಕ ಬಾರಿ ಜಿಲ್ಲಾ ಪಂಚಾಯತಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರೈತರ ಬಗ್ಗೆ ಅಪಾರ ಕಳಕಳಿ ಹೊಂದಿರುವ ಘನ ಸರ್ಕಾರ, ರೈತರ ಬಗ್ಗೆ ಕಾಳಜಿ ವಹಿಸಿ ಹಾಲು ಸಂಘಗಳಿಗೆ ಅನುದಾನ ನೀಡಲು ಸೂಕ್ತ ಯೋಜನೆ ರೂಪಿಸಬೇಕು. ಆ ದಿಶೆಯಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡು ಹಾಲು ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿ ಸ್ವಾವಲಂಭಿಗಳಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡಲು ಸೂಕ್ತ ಆದೇಶ ಹೊರಡಿಸಬೇಕೆಂದು ಸರ್ಕಾರಕ್ಕೆ ಅವರು ಮನವಿ ಮಾಡಿದರು.

300x250 AD

ಅದೇ ರೀತಿ ಪ್ರತೀ ಸಂಘವನ್ನು ಗಣಕೀಕೃಗೊಳಿಸಿ ಎಲ್ಲ ಸಂಘಗಳು ಗಣಕಯಂತ್ರಗಳನ್ನು ಹೊಂದಿ ಪ್ರಸ್ತುತ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ತಮ್ಮ ಕಾರ್ಯವೈಖರಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ರೈತರಿಗೆ ಇನ್ನೂ ಹೆಚ್ಚಿನ ಅನುಕೂಲವಾಗುವಂತೆ ಮಾಡುವುದು ನಮ್ಮ ಉದ್ದೇಶ ಎಂದರು.

ನಿರ್ದೇಶಕರ ಸಂಘಗಳಡೆಗಿನ ಬಗ್ಗೆ ಕಾಳಜಿ ಹಾಗೂ ಅತ್ಯಂತ ಉತ್ತಮ ರೀತಿಯ ಕಾರ್ಯವೈಖರಿ ಬಗ್ಗೆ ಚಿಕ್ಕಬೆಂಗಳೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಧಾರವಾಡ ಸಹಕಾರ ಹಾಲು ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಮುಖ್ಯಸ್ಥರಾದ ಎಸ್‌ಎಸ್‌ ಬಿಜೂರ್, ವಿಸ್ತರಣಾಧಿಕಾರಿಯಾದ ಮೌನೇಶ ಸೋನಾರ, ಅಭಿಷೇಕ ನಾಯ್ಕ, ಜಯಂತ ಪಟಗಾರ ಹಾಗೂ ಚಿಕ್ಕಬೆಂಗಳೆ ಸಂಘದ ಅಧ್ಯಕ್ಷರಾದ ಕೆರೆಸ್ವಾಮಿ ನಾಯ್ಕ, ಸಂಘದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಸಂಘದ ಆಡಳಿತ ಮಂಡಳಿಯ ಸದಸ್ಯರು, ಹಾಲು ಉತ್ಪಾದಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top