• Slide
    Slide
    Slide
    previous arrow
    next arrow
  • ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಶೆಟ್ಟರ್ ಸಹಿತ ಮೂವರಿಗೆ ಟಿಕೆಟ್ ಘೋಷಣೆ

    300x250 AD

    ಬೆಂಗಳೂರು: ಜೂನ್ 30ರಂದು ರಾಜ್ಯ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

    ಕಾಂಗ್ರೆಸ್‌ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ .ಜೊತೆಗೆ ಎನ್ಎಸ್ ಬೋಸರಾಜು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗ ತಿಪ್ಪಣ್ಣ ಕಮಕನೂ‌ ಅವರಿಗೂ ಟಿಕೆಟ್ ಘೋಷಣೆ ಮಾಡಲಾಗಿದೆ.

    ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಂಗಳವಾರ (ಜೂನ್ 20) ಕೊನೆಯ ದಿನವಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

    300x250 AD

    ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಆ ನಂತರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top