• Slide
    Slide
    Slide
    previous arrow
    next arrow
  • ಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ: ಪ್ರಕರಣ ದಾಖಲು

    300x250 AD

    ಯಲ್ಲಾಪುರ: ತಾಲೂಕಿನ ನಂದೊಳ್ಳಿ ಪಂಚಾಯತ್ ವ್ಯಾಪ್ತಿಯ ಕಣ್ಣೀಮನೆ ಗ್ರಾಮದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಂದೊಳ್ಳಿ ಪಂಚಾಯತ್ ವ್ಯಾಪ್ತಿಯ ಕನ್ನಡಕಲ್ ಗ್ರಾಮದ ಯಶೋಧ ಮಹಾಭಲೇಶ್ವರ ಹೆಗಡೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದು,. ಈಕೆ ಮಂಗಳವಾರ ನಸುಕಿನ ಜಾವದಲ್ಲಿ ತನ್ನ ತವರು ಮನೆಯ ಮುಂಭಾಗದ ಚಿಕ್ಕಪ್ಪನ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ಕುರಿತು ಯಲ್ಲಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top