Slide
Slide
Slide
previous arrow
next arrow

ಜು.7ಕ್ಕೆ ರಾಜ್ಯ ಬಜೆಟ್ ಮಂಡನೆ: ಯು.ಟಿ. ಖಾದರ್

300x250 AD

ಬೆಂಗಳೂರು: ವಿಧಾನಮಂಡಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದ್ದು, ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜುಲೈ 7 ರಂದು ಬಜೆಟ್‌ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜು.3ರಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರ ಭಾಷಣ ಹಾಗೂ ಜು.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಜೆಟ್‌ ಮಂಡನೆಯಾಗಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮುಂದುವರೆದ ಭಾಗವಾಗಿ ಜು.3 ರಂದು ಬಜೆಟ್‌ ಅಧಿವೇಶನ ಶುರುವಾಗಲಿದೆ ಎಂದಿದ್ದಾರೆ.

ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಮೊದಲ ದಿನ ರಾಜ್ಯಪಾಲರ ಭಾಷಣ ನಡೆಯಲಿದೆ. ಬಳಿಕ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಬಳಿಕ ಜು.7 ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್‌ ಮಂಡನೆ ಮಾಡಲಿದ್ದಾರೆ. ಬಜೆಟ್‌ ಮೇಲಿನ ಸಾಮಾನ್ಯ ಚರ್ಚೆ ಬಳಿಕ ಅನುದಾನದ ಬೇಡಿಕೆಗಳನ್ನು ಅಂಗೀಕರಿಸಲಾಗುವುದು ಎಂದು ಮಾಹಿತಿ ನೀಡಿದರು.

300x250 AD

ಈ ನಡುವೆ ವಿಧಾನಸಭೆಯಲ್ಲಿ ಹಾಕಲಾಗಿರುವ ವೀರ ಸಾವರ್ಕರ್‌ ಫೋಟೋ ಹಾಗೆಯೇ ಇರಲಿದೆ ಎಂಬ ಸುಳಿವನ್ನೂ ಅವರು ನೀಡಿದ್ದಾರೆ.

Share This
300x250 AD
300x250 AD
300x250 AD
Back to top