Slide
Slide
Slide
previous arrow
next arrow

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಸಿ.ಟಿ.ರವಿ

300x250 AD

ಹೊನ್ನಾವರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಪ್ರಭಾವಶಾಲಿ ವ್ಯಕ್ತಿಗಳ ಸಂಪರ್ಕದ ಗುರಿ ಹೊಂದಿದ್ದು, ಫಲಾನುಭವಿಗಳ ಸಮಾವೇಶ ನಡೆಯಲಿದೆ. ಸಂಯುಕ್ತ ಮೋರ್ಚಾ ಸಮಾವೇಶದೊಂದಿಗೆ ಪ್ರತಿ‌ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ನಡೆಸಿ,ಪ್ರತಿ ಮನೆ‌ಮನೆಯನ್ನು ತಲುಪುವ ಉದ್ದೇಶ ಹೊಂದಿದ್ದೇವೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬೆಲೆ ಏರಿಕೆ ಬಿಸಿಯನ್ನು ಜನ ಅನುಭವಿಸುತ್ತಿದ್ದಾರೆ. ಬೆಲೆ ಏರಿಕೆ ಬಗ್ಗೆ ಚುನಾವಣೆಗೂ ಮುನ್ನ ಸೂಚನೆಯೂ ನೀಡದೇ ಜನತೆಗೆ ಮೋಸ‌ಮಾಡಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕಾಂಗ್ರೆಸ್ ಯೋಚಿಸಿದೆ.ಇವೆಲ್ಲವೂ ರಾಜ್ಯದ ಅಭಿವೃದ್ಧಿಗೆ, ಜನತೆಗೆ ಮಾರಕವಾಗಿದೆ ಎಂದರು.

300x250 AD

ಈ ವೇಳೆ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಮೋದ ಮಧ್ವರಾಜ, ಶಾಸಕ ದಿನಕರ ಶೆಟ್ಟಿ, ಸುನಿಲ್ ನಾಯ್ಕ್, ರೂಪಾಲಿ ನಾಯ್ಕ್ ಇನ್ನೂ ಹಲವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top