Slide
Slide
Slide
previous arrow
next arrow

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

300x250 AD

ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಘಟಕದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪಟ್ಟಣದ ಪಿ.ಎಂ.ಪ್ರೌಢಶಾಲೆಯ ರೈತ ಭವನದಲ್ಲಿ ಜೂನ್ 25ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ಈ ಕಾರ್ಯಕ್ರಮವನ್ನು ವೈದ್ಯರಾದ ಡಾ.ಕರುಣಾಕರ ಎಂ.ನಾಯ್ಕ ಉದ್ಘಾಟಿಸಲಿದ್ದು, ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಡಿ.ಜಿ.ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಮಧಾರಿ ಸಮಾಜದ ಮುಖಂಡ ರಾಜೇಂದ್ರ ವಿ. ನಾಯ್ಕ, ತಾಲೂಕು ನಾಮಧಾರಿ ಆರ್ಯ ಈಡಿಗ ಸಂಘದ ಅಧ್ಯಕ್ಷ ನಾಗೇಶ ನಾಯ್ಕ ಆಚಾ, ಇಂಜಿನಿಯರ್ ರಮಾನಂದ ನಾಯ್ಕ ಕೊಂಡಳ್ಳಿ ಪಾಲ್ಗೊಳ್ಳಲಿದ್ದಾರೆ.

300x250 AD

ಸಭೆಯಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಅಧ್ಯಕ್ಷ ಡಿ.ಜಿ.ನಾಯ್ಕ, ಗೌರವಾಧ್ಯಕ್ಷ ಮಾದೇವ ಎಂ. ನಾಯ್ಕ, ಪ್ರಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ, ಯುವ ಅಧ್ಯಕ್ಷ ಮಂಜುನಾಥ ಕೆ. ನಾಯ್ಕ, ಉಪಾಧ್ಯಕ್ಷರಾದ ಸಂಜಯ ಆರ್. ನಾಯ್ಕ, ಉಮೇಶ ಎನ್. ನಾಯ್ಕ, ರಮೇಶ ಎಸ್.ನಾಯ್ಕ, ಖಜಾಂಚಿ ಶ್ರೀಪಾದ ಟಿ. ನಾಯ್ಕ, ಕಾರ್ಯದರ್ಶಿ ವಸಂತ ವಿ. ನಾಯ್ಕ, ಮಹಿಳಾ ಅಧ್ಯಕ್ಷೆ ಲೀಲಾವತಿ ಡಿ.ನಾಯ್ಕ, ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ಮಂಜುಳಾ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕೊಂಡಳ್ಳಿ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top